‘ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಸಚಿವ ಆರ್.ಬಿ.ತಿಮ್ಮಾಪುರ ತಿರುಗೇಟು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ 136 ಶಾಸಕರ ಬೆಂಬಲ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕಮಾಂಡ್ ಬೆಂಬಲವೂ ಇದೆ.
ಹೀಗಾಗಿ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಹೆಚ್ಚು ಬೆಲೆ ಇಲ್ಲ. ಬಿ.ಕೆ.ಹರಿಪ್ರಸಾದ್ ಯಾವ ದೃಷ್ಟಿ ಇಟ್ಟುಕೊಂಡು ಹೇಳಿದ್ದಾರೆ ಗೊತ್ತಿಲ್ಲ. ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಬಿ.ಕೆ.ಹರಿಪ್ರಸಾದ್ ಹೇಳಿಕೆಯನ್ನು ನಾವು ಗಂಭೀರವಾಗಿ ಪರಿಗಣಿಸಲ್ಲ ಎಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.