ಬೆಂಗಳೂರು: ಖಾಸಗಿ ವಾಹನ ಚಾಲಕ ಮತ್ತು ಮಾಲಿಕರ ಜತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಸಾರಿಗೆ ಇಲಾಖೆ ಮುಖ್ಯ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಆದರೆ ಸಭೆಯಲ್ಲಿ ಓಲಾ, ಉಬರ್ ಸಂಸ್ಥೆಗಳು ಮಾತ್ರ ಭಾಗಿಯಾಗಿವೆ. ಆಟೋ, ಖಾಸಗಿ ಬಸ್, ಟ್ಯಾಕ್ಸಿ ಚಾಲಕರ ಜೊತೆ ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದ ಹಿನ್ನೆಲೆ ಸಾರಿಗೆ ಒಕ್ಕೂಟದಿಂದ ಎಲ್ಲರೂ ಬಂದ್ಗೆ ಕರೆ ಕೊಟ್ಟಿದ್ದೇವೆ. ಹೀಗಾಗಿ ಒಟ್ಟಿಗೆ ಸಭೆ ಕರೆಯುವಂತೆ ಆಗ್ರಹಿಸಿವೆ.