ಬೆಂಗಳೂರು ;- ಗ್ರಾಹಕರಿಗೆ ಕಡಿಮೆ ದರದಲ್ಲಿ ವಿದ್ಯುತ್ ಕೊಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ದರದಲ್ಲಿ ವಿದ್ಯುತ್ ನೀಡುವ ನೂತನ ‘ಇಂಧನ ನೀತಿ’ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ.
ಸೋಲಾರ್, ವಿಂಡ್ ಮತ್ತು ಗ್ರೀನ್ ಹೈಡ್ರೋಜನ್ ಇಂಧನ ಉತ್ಪಾದನೆಗೆ ಒತ್ತು ಕೊಡುವ ಹೊಸ ನೀತಿಯೊಂದನ್ನು ಜಾರಿ ಮಾಡಲು ಚಿಂತನೆ ನಡೆದಿದೆ , ಸಾಂಪ್ರಾದಿಯಕವಲ್ಲದ ಮೂಲಗಳಿಂದ ಇಂಧನ ಉತ್ಪಾದಿಸಿದರೆ ಉತ್ಪಾದನಾ ದರ ಕಡಿಮೆಯಾಗುತ್ತದೆ.
ಆಗ ಗ್ರಾಹಕರಿಗೂ ಕಡಿಮೆ ದರದಲ್ಲಿ ವಿದ್ಯುತ್ ಕೊಡಬಹುದು. ಈ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದರು.
ಜಲವಿದ್ಯುತ್ ಉತ್ಪಾದನೆಗೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ಮೂಲಗಳಿಂದ ವಿದ್ಯುತ್ ಉತ್ಪಾದಿಸಿದರೆ ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ. ಹಾಗೆಯೇ ಸೋಲಾರ್ನಿಂದ ಇಂಧನ ಉತ್ಪಾದಿಸಲು ರೈತರಿಂದ ಭೂಮಿ ಗುತ್ತಿಗೆ ಪಡೆಯುವ ಬಗ್ಗೆಯೂ ಚಿಂತನೆ ನಡೆಸಿದ್ದೇವೆ. ವಿದ್ಯುತ್ ಸಬ್ಸ್ಟೇಷನ್ ಅಕ್ಕಪಕ್ಕದಲ್ಲಿರುವ ಜಮೀನುಗಳನ್ನು ಲೀಸ್ಗೆ ಪಡೆದು ಸೋಲಾರ್ನಿಂದ ವಿದ್ಯುತ್ ಉತ್ಪಾದಿಸಿ ಆ ಸಬ್ಸ್ಟೇಷನ್ ಮೂಲಕ ಸರಬರಾಜು ಮಾಡಲು ಸಾಧ್ಯವಿದೆ ಎಂದರು. ಸೋಲಾರ್, ವಿಂಡ್ ಮತ್ತು ಗ್ರೀನ್ ಹೈಡ್ರೋ ಇಂಧನ ಉತ್ಪಾದನೆಗೆ ಒತ್ತು ನೀಡಲು ಹೊಸ ನೀತಿಯೊಂದನ್ನು ಜಾರಿ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ ಎಂದರು