ಬೆಂಗಳೂರು: ಲೋಕಸಭೆ ಚುನಾವಣೆ ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಮತ್ತೆ ಆರು ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳು ಹಾಗೂ ಸಂಜೆ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಜೊತೆಗೆ ಸಂಜೆ 7 ಗಂಟೆಯಿಂದ ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ಪರಿಷತ್ ಸದಸ್ಯರ ಜತೆ ವಿಡಿಯೋ ಸಂವಾದ ಮಾಡಲಿದ್ದಾರೆ.