ಒಂದು ವಾರದ ಹಿಂದೆ ದಂಪತಿ ಬಂದು ಭೇಟಿ ಮಾಡಿದ್ದರು. ಸೈಟ್ ವಿಚಾರವಾಗಿ ಹಾಗೂ ಅಭಿನಂದನೆ ಸಲ್ಲಿಸೋಕೆ ಬಂದಿದ್ದರು. ತುಂಬಾ ಆರೋಗ್ಯಕರವಾಗಿದ್ದರು. ಈ ಅಭಿಮಾನದ ಸಾಗರವೇ ಅವರನ್ನು ಜನ ಎಷ್ಟು ಇಷ್ಟ ಪಟ್ಟಿದ್ದರು ಎನ್ನುವುದು ಗೊತ್ತಾಗುತ್ತೆ. ಚಿಕ್ಕ ವಯಸ್ಸಿನಲ್ಲಿ ಹೀಗೆ ಆಗಬಾರದಿತ್ತು. ಎಲ್ಲರೂ ಆರೋಗ್ಯದ ಬಗ್ಗೆ ಗಮನ ಕೊಡಿ. ಕುಟುಂಬದವರಿಗೆ ಹಾಗೂ ಅವರ ಪತಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೇವರು ಕೊಡಲಿ. ಅವರ ಕುಟುಂಬದರೆಲ್ಲ ನಮಗೆ ಬಹಳ ಆತ್ಮೀಯರು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ್ ಸೂಚಿಸಿದರು.