ಬೆಂಗಳೂರು: ನಾವು ಕಮಿಷನ್ ಹಿಂದೆ ಬಿದ್ದವರಲ್ಲ. ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ಈಗಾಗಲೇ ಗುತ್ತಿಗೆದಾರರು ಬಾಕಿ ಬಿಲ್ ಕುರಿತು ಚರ್ಚಿಸಿದ್ದಾರೆ. P.O.W ಕಾಮಗಾರಿಗಳ ಬಿಲ್ ಬಿಡುಗಡೆಗೆ ಸೂಚನೆ ನೀಡಲಾಗಿದೆ. ಕೆಲವು ಪ್ರಕ್ರಿಯೆ ಮುಗಿದ ಕೂಡಲೆ ಹಣ ಬಿಡುಗಡೆ ಮಾಡುತ್ತೇವೆ. ಕೆಲವು ಗುತ್ತಿಗೆದಾರರು ಸ್ವಾರ್ಥ, ದುರುದ್ದೇಶಕ್ಕೆ ಆರೋಪ ಮಾಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.