ಮೈಸೂರು: ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಯಲ್ಲಿ ಮಾಡಿರುವ ವ್ಯವಸ್ಥೆ ಬಗ್ಗೆ ಇಂದು ಡ್ರೈ ರನ್ ಮಾಡಿದ್ದೇವೆ. ಎಲ್ಲಾ ಕಡೆ ಮಾಡಿಕೊಂಡಿರುವ ಸಿದ್ದತೆ ಪರಿಶೀಲಿಸಿದ್ದೇವೆ. ನಾಳೆಯೂ ಪರಿಶೀಲನೆ ಮಾಡುತ್ತೇವೆ. ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಮಾತ್ರ ಮುಖ್ಯವಲ್ಲ. ಈಗಾಗಲೇ 50 ಲಕ್ಷ ಫಲಾನುಭವಿಗಳಿಗೆ ಪಟ್ಟಿ ರೆಡಿಯಾಗಿದೆ. ಹಂತ ಹಂತವಾಗಿ ಎಲ್ಲಾ ಫಲಾನುಭವಿಗಳಿಗೂ ಗೃಹಲಕ್ಷ್ಮಿ ಯೋಜನೆ ಹಣ ತಲುಪಲಿದೆ. ಈ ಕಾರ್ಯಕ್ರಮ ಪಕ್ಷಾತೀತವಾಗಿದೆ. ಆಯಾಯ ಕ್ಷೇತ್ರದ ಶಾಸಕರು ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಮುಂದಾಗಬೇಕು ಎಂದರು.