ಮೈಸೂರು: ಇಂದಿನ (ಮೇ.03) ಕೆಪಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವರುಣಾ ಕ್ಷೇತ್ರದ ಪ್ರವಾಸ ರದ್ದಾಗಿದೆ. ಮಧ್ಯಾಹ್ನ 2 ಗಂಟೆಗೆ ವರುಣಾದಲ್ಲಿ ಡಿಕೆ ಶಿವಕುಮಾರ್ ಪ್ರಚಾರ ನಿಗದಿಯಾಗಿತ್ತು. ಇನ್ನು ಉಳಿದಂತೆ ಮೈಸೂರು ಜಿಲ್ಲೆಯ ವಿವಿಧೆಡೆ ಡಿಕೆ ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಂಜನಗೂಡಿಗೆ ಆಗಮಿಸಲಿರುವ ಡಿಕೆ ಶಿವಕುಮಾರ್ ಅವರು ಕ್ಷೇತ್ರದಲ್ಲಿ ದಿ. ಧ್ರುವನಾರಾಯಣ ಪುತ್ರ ದರ್ಶನ್ ಧ್ರುನಾರಾಯಣ ಪರ ಮತಯಾಚಿಸಲಿದ್ದಾರೆ. ಸಂಜೆ 5:30ಕ್ಕೆ ಮೈಸೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ.