ರಾಯಚೂರು: ಗುಂಡಿನ ದಾಳಿ ನಡೆಸಿ ಕಾರಿನಲ್ಲಿ ತೆರಳುತ್ತಿದ್ದ ವೈದ್ಯನ ಹತ್ಯೆಗೆ ಯತ್ನಿಸಿರುವಂತಹ ಘಟನೆ ರಾಯಚೂರು ಹೊರವಲಯದ ಸಾತ್ ಮೈಲ್ ಬಳಿ ನಡೆದಿದೆ. ರಾಯಚೂರಿನ ಬೆಟ್ಟದೂರು ಆಸ್ಪತ್ರೆಯ ವೈದ್ಯ ಜಯಪ್ರಕಾಶ್ ಹತ್ಯೆಗೆ ಯತ್ನಿಸಲಾಗಿದೆ. ಕಾರು ಅಡ್ಡಗಟ್ಟಿ ಬೈಕ್ನಲ್ಲಿ ಬಂದಿದ್ದ ಇಬ್ಬರಿಂದ ಗುಂಡಿನ ದಾಳಿ ಮಾಡಿದ್ದು,
ಒಂದು ಸುತ್ತು ಫೈರ್ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಕಾರಿನ ಬ್ಯಾನಟ್ಗೆ ಗುಂಡು ತಗುಲಿದ್ದರಿಂದ ಅದೃಷ್ಟವಶಾತ್ ವೈದ್ಯ ಜಯಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.