ಕಾಂಗ್ರೆಸ್​ ಪ್ರಣಾಳಿಕೆ ಪ್ರತಿಯನ್ನು ಸುಟ್ಟುಹಾಕಿದ ಕೆಎಸ್ ಈಶ್ವರಪ್ಪ

ಕಾಂಗ್ರೆಸ್​​ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಕಲಬುರಗಿ ನಗರದಲ್ಲಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಆಗ್ರಹಿಸಿದ್ದಾರೆ. ಕಾಂಗ್ರೆಸ್​ ಸರ್ಕಾರ PFI ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ದೇಶದಲ್ಲಿ PFI ಬ್ಯಾನ್ ಆಗಿದೆ ಅನ್ನೋದೆ ಕಾಂಗ್ರೆಸ್​ಗೆ ಗೊತ್ತಿಲ್ಲ. BJP ಸರ್ಕಾರ ರಾಷ್ಟ್ರದ್ರೋಹಿ ಸಂಘಟನೆಯನ್ನು ಬ್ಯಾನ್ ಮಾಡಿದೆ. ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ. ವಿಪಕ್ಷ ಸ್ಥಾನ ಪಡೆಯುವಷ್ಟು ಸ್ಥಾನವನ್ನೂ ಕಾಂಗ್ರೆಸ್​ ಗೆಲ್ಲುವುದಿಲ್ಲ ಎಂದು ಪ್ರಣಾಳಿಕೆ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *