ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ ಎಂದರು. ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.