ಹಾಸನ: ಜೋಕಾಲಿ ಆಡಲು ಹೋಗಿ ಬಾಲಕಿ ಪ್ರಾಣ ಕಳೆದುಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಕುಣಿಕೇರಿ ಗ್ರಾಮದಲ್ಲಿ ನಡೆದಿದೆ. ಬಸವರಾಜು ಬೇಬಿ ದಂಪತಿಯ ಪುತ್ರಿ ಸಾನಿತ (9) ಮೃತಪಟ್ಟ ದುರ್ದೈವಿಯಾಗಿದ್ದು, ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಪೋಷಕರು ಮನೆಯ ಒಳಗೆ ಸೀರೆಯಲ್ಲಿ ಜೋಕಾಲಿ ಆಡುಲು ಸೀರೆ ಕಟ್ಟಿದ್ದರು. ಜೋಕಾಲಿ ಆಡುವ ಸಂದರ್ಭದಲ್ಲಿ ಆಯತಪ್ಪಿ ಕುತ್ತಿಗಿಗೆ ಸೀರೆ ಬಿಗಿದು ಬಾಲಕಿ ಸಾವನ್ನಪ್ಪಿದ್ದಾಳೆ, ಮುದ್ದಿನ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.