ನಾಯಿ ಬೊಗಳಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

 

ಬೆಂಗಳೂರು:  ವೃದ್ಧನೊಬ್ಬ  ಛೂ ಬಿಟ್ಟಿದ್ದಕ್ಕೆ ನಾಯಿಯೊಂದು ಬೊಗಳಿದೆ  ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ಚಾಕು ಇರಿದಿರುವ ಘಟನೆ ನಗರದ ಮಲ್ಲೇಶ್ವರಂನಲ್ಲಿ  ನಡೆದಿದೆ. ಆರೋಪಿ ರಾಜು ವೃದ್ಧ ಬಾಲಸುಬ್ರಹ್ಮಣ್ಯ ಎಂಬವರಿಗೆ ಚಾಕು ಇರಿದಿದ್ದಾನೆ. ರಾಜು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಯಿಯೊಂದು ಬೊಗಳಿತ್ತು. ಈ ನಾಯಿಯನ್ನು ವೃದ್ಧನೇ ಬಿಟ್ಟಿದ್ದಾನೆಂದು ಕೋಪಗೊಂಡ ರಾಜು ಚಾಕು ಇರಿದಿದ್ದಾನೆ.

ಘಟನೆ ಬಗ್ಗೆ ಮಲ್ಲೇಶ್ವರಂ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದು, ವೃದ್ಧನಿಗೆ ಚಾಕು ಇರಿದ ಆರೋಪಿ ರಾಜುನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

 

Loading

Leave a Reply

Your email address will not be published. Required fields are marked *