ಬೆಂಗಳೂರು ;- ನಗರದ ಜೋಗುಪಾಳ್ಯದಲ್ಲಿ ನೇಣು ಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. 30 ವರ್ಷದ ದಿವ್ಯಾ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಎಂದು ಗುರುತಿಸಲಾಗಿದೆ.
2014 ರಲ್ಲಿ ಅರವಿಂದ್ ಎಂಬ ಟೆಕ್ಕಿಯನ್ನ ಮೃತ ದಿವ್ಯ ವಿವಾಹವಾಗಿದ್ದರು.
ಮದುವೆಯ ನಂತರ ಗಂಡನ ಕುಟುಂಬಸ್ಥರಿಂದ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ.
ದಿವ್ಯಾ ಡೋರ್ ಲಾಕ್ ಮಾಡಿಕೊಂಡಿದ್ದಾಳೆಂದು ಅತ್ತೆ ಮನೆಯವರಿಗೆ ಪತಿ ಅರವಿಂದ್ ಕರೆ ಮಾಡಿದ್ದಾರೆ. ದಿವ್ಯ ಕುಟುಂಬಸ್ಥರು ಬಂದು ನೋಡಿದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ದಿವ್ಯ ಸಾವನ್ನಪ್ಪಿದ್ದಾರೆ. ಹೀಗಾಗಿ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ದ ಮೃತ ದಿವ್ಯಾ ಪೊಷಕರು ಕೊಲೆ ಆರೋಪ ಮಾಡಿದ್ದು, ಹಲಸೂರು ಪೊಲೀಸರಿಂದ ಆರೋಪಿ ಪತಿ ಅರವಿಂದ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.