ಬೆಂಗಳೂರು: ಸರ್ಕಾರದ ವಿರುದ್ಧ ಹೆಚ್ಡಿಕೆ ವರ್ಗಾವಣೆ ದಂಧೆ ಆರೋಪ ವಿಚಾರವಾಗಿ‘ ಕುಮಾರಸ್ವಾಮಿಯವರು ತಮಗೆ ಸಿಕ್ಕಿದ ಮಾಹಿತಿ ಮೇಲೆ ಮಾತಾಡಿದ್ದಾರೆ, ಅದು ಸತ್ಯ ಎಲ್ಲಾ ಇಲಾಖೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇದ್ಯಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಮತ್ತು ಕೊಡುತ್ತಿಲ್ಲ ಎಂದರು.