ಹೋರಾಟದ ನಡುವೆಯು ತಮಿಳುನಾಡಿಗೆ 12,631 ಕ್ಯೂಸೆಕ್ ನೀರು ಬಿಡುಗಡೆ

ಮಂಡ್ಯ: ಕೆಆರ್ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ನೀರನ್ನು ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೆಚ್ಚು ಹೆಚ್ಚು ಪ್ರಮಾಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಕೆಆರ್ಎಸ್ ಡ್ಯಾಂನ ನೀರಿನ ಮಟ್ಟ 105 ಅಡಿಗೆ ಕುಸಿತ ಕಂಡಿದೆ. ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಕೈಕಟ್ಟಿ ಕುಳಿತಿದೆ.
ಕೆಆರ್ಎಸ್ ಡ್ಯಾಂನಲ್ಲಿ ನೀರಿನ ಪ್ರಮಾಣ ಕುಸಿಯುತ್ತಿರುವುದರಿಂದ ಕಾವೇರಿ ಕೊಳ್ಳದ ರೈತರಲ್ಲಿ ಕಾವೇರಿ ಒಡಲು ಬರಿದಾಗುವ ಆತಂಕ ಮೂಡಿದೆ. ರಾಜ್ಯ ಸರ್ಕಾರ ಅನ್ನದಾತರ ಮಾತಿಗೂ ಕ್ಯಾರೆ ಎನ್ನದ ಹಿನ್ನೆಲೆ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಹಲವೆಡೆ ಪ್ರತಿಭಟನೆ ಮುಂದುವರಿದಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಈ ಹೋರಾಟದ ನಡುವೆಯೂ ಇಂದು ಕೂಡಾ ತಮಿಳುನಾಡಿಗೆ 12,631 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಡ್ಯಾಂನಿಂದ ಒಟ್ಟಾರೆ 15,247 ಕ್ಯೂಸೆಕ್ ಹೊರಹರಿವಿದೆ. ಅಷ್ಟಾಗಿ ಒಳಹರಿವು ಪ್ರಮಾಣ ಏರಿಕೆ ಕಾಣಿಸುತ್ತಿಲ್ಲ. ಕೆಆರ್ಎಸ್ ಡ್ಯಾಂಗೆ ಕೇವಲ 4,983 ಕ್ಯೂಸೆಕ್ ನೀರು ಮಾತ್ರವೇ ಹರಿದು ಬರುತ್ತಿದೆ. ಡ್ಯಾಂನಲ್ಲಿ ನೀರು ಸಂಗ್ರಹಣೆಗೆ ಗರಿಷ್ಠ ಮಟ್ಟ 124.80 ಅಡಿ ಇದೆ. ಸದ್ಯ 105.70 ಅಡಿ ನೀರು ಸಂಗ್ರಹ ಇದೆ. 47.542 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 27.617 ಟಿಎಂಸಿ ನೀರು ಮಾತ್ರ ಶೇಖರಣೆಯಾಗಿದೆ.

Loading

Leave a Reply

Your email address will not be published. Required fields are marked *