ಹಾಸನ: ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನಲೆ ಹಾಸನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುವ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, 40% ಕಮಿಷನ್ ಆರೋಪ ಸೇರಿ ಎಲ್ಲದರ ಬಗ್ಗೆಯೂ ತನಿಖೆ ಆಗುತ್ತೆ. ಜೊತೆಗೆ ಬಿಟ್ ಕಾಯಿನ್ ಅವ್ಯವಹಾರ, ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆ ಕೂಡ ಮರು ತನಿಖೆಯಾಗುತ್ತದೆ ಎಂದರು.