ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ. ಟಿಟಿಡಿ ನೂತನ ಅಧ್ಯಕ್ಷರಾಗಿ ಭೂಮನ ಕರುಣಾಕರ ರೆಡ್ಡಿ ನೇಮಕವಾಗಿದ್ದಾರೆ. ತಿರುಪತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಭೂಮನ ಕರುಣಾಕರ ರೆಡ್ಡಿ, ಆಗಸ್ಟ್ 8 ರಿಂದ ಟಿಟಿಡಿ ಮಂಡಳಿಗೆ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದೀಗ ದೇವಾಲಯಕ್ಕೆ ಶೀಘ್ರವೇ ಪದಾಧಿಕಾರಿಗಳ ಆಯ್ಕೆ ಮಾಡುವುದಾಗಿ ಸೂಚನೆ ನೀಡಲಾಗಿದೆ.