ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿದ ಆಯನೂರ್ ಮಂಜುನಾಥ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್ ನಾಯಕ ಆಯನೂರು ಮಂಜುನಾಥ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ. ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಆಯನೂರು ಮಂಜುನಾಥ ಸೋಲು ಕಂಡಿದ್ದರು.

ಭಾನುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಆಯನೂರು ಮಂಜುನಾಥ ಭೇಟಿ ಮಾಡಿದರು. ಆಯನೂರು ಮಂಜುನಾಥ ಕಾಂಗ್ರೆಸ್ಸೇರಲಿದ್ದಾರೆ? ಎಂಬ ಸುದ್ದಿಗಳ ನಡುವೆ ಭೇಟಿ ನಡೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜೆಡಿಎಸ್ನಾಯಕರೊಬ್ಬರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಭೇಟಿ ಶಿವಮೊಗ್ಗದ ರಾಜಕೀಯ ಲೆಕ್ಕಾಚಾರವನ್ನು ಬದಲಾವಣೆ ಮಾಡಲಿದೆಯೇ? ಎಂದು ಕಾದು ನೋಡಬೇಕಿದೆ.

Loading

Leave a Reply

Your email address will not be published. Required fields are marked *