ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಸಚಿವ ಜಮೀರ್ ಅಹ್ಮದ್ ಆಟೋದಲ್ಲಿ ಬಿರಿಯಾನಿ ಕಳುಹಿಸಿದ್ದರು. ಆದರೆ ಅನುಮತಿ ಇಲ್ಲದೆ ತಂದಿದ್ದ ಬಿರಿಯಾನಿಯನ್ನ ಒಳಗೆ ಬಿಡುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಹೀಗಾಗಿ ಆಟೋದಲ್ಲಿ ತಂದಿದ್ದ ಬಿರಿಯಾನಿಯನ್ನು ವಾಪಸ್ ಕಳುಹಿಸಿದ್ದಾರೆ. ಆದರೆ ಅದೇ ಬಿರಿಯಾನಿ ಬೆನ್ಜ್ ಕಾರಿನಲ್ಲಿ ಹೋದಾಗ ಒಳಗೆ ಬಿಟ್ಟಿದ್ದಾರೆ. ನಂತರ ಬಿರಿಯಾನಿಯನ್ನು ಇಳಿಸಿ ವಾಪಸ್ ಕಳುಹಿಸಿದ್ದಾರೆ.