ಬಿಬಿಎಂಪಿ ಯಿಂದ ಕುಡಿಯುವ ನೀರಿನ ಯೋಜನೆಗೆ ಯಶವಂತಪುರ ಕ್ಷೇತ್ರಕ್ಕೆ ಬರಪೂರ ಕೊಡುಗೆ ಸಿಕ್ಕಿದೆ. ಎಸ್ ಟಿ ಸೋಮಶೇಖರ್ ಕ್ಷೇತ್ರಕ್ಕೆ 7 ಕೋಟಿ 63 ಲಕ್ಷ ರೂ ಅನುದಾನ ಬಿಡುಗಡೆ ಆಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತನಾಡಲು ಭೇಟಿಯಾಗಿದ್ದೇನೆ ಎಂದಿದ್ದರು. ಆದರೆ ಇದು ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯ ಮುನ್ಸೂಚನೆ ಎಂದೇ ಹೇಳಲಾಗುತ್ತಿದೆ.