ಉಡುಪಿ: ವಿದ್ಯುತ್ ದರ ಏರಿಕೆಗೂ ಬಿಜೆಪಿ ಸರ್ಕಾರ ವಿರುದ್ಧ ಬೊಟ್ಟು ಮಾಡುತ್ತಾರೆ. ಆದರೆ ಬಿಜೆಪಿ ಸರ್ಕಾರ ಕೆಇಆರ್ಸಿ ಪ್ರಸ್ತಾಪಕ್ಕೆ ಅನುಮೋದನೆ ಕೊಟ್ಟಿಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇಂಧನ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿಗಿಂತ ದೊಡ್ಡವರಾ? ಕೈಗಾರಿಕೆ ಉದ್ಯಮಿಗಳು ಅನ್ಯರಾಜ್ಯಕ್ಕೆ ಗುಳೆ ಹೋಗುತ್ತೇವೆ ಅಂತಿದ್ದಾರೆ. ಯಾವುದೇ ತಯಾರಿ ಇಲ್ಲದೆ ಶಕ್ತಿ ಯೋಜನೆ ಜಾರಿ ಮಾಡಿದ್ದಾರೆ. ಪ್ರಯಾಣಿಕರು ಹೆಚ್ಚಾದ್ದರಿಂದ ಬಸ್ ಬಾಗಿಲು ಮುರಿದು ಹೋಗಿದೆ. ಮಹಿಳೆಯರು, ಮಕ್ಕಳು ಕೈಅಡ್ಡ ಹಾಕಿದರೂ ಸರ್ಕಾರಿ ಬಸ್ ನಿಲ್ಲಿಸುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಅತ್ತೆಗೋ ಸೊಸೆಗೊ ಎಂಬ ಗೊಂದಲ ಇದೆ ಎಂದರು.