ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಶಕ್ತಿ ಹೊಂದಿದೆ: ಪ್ರೀತಂಗೌಡ

ಹಾಸನ: ಲೋಕಸಭೆ ಚುನಾವಣೆಯಲ್ಲಿ ಪ್ರೀತಂಗೌಡ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿ ನಾನು ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿ ಇರುತ್ತೇನೆ. ಹಾಸನ ವಿಧಾನಸಭಾ ಕ್ಷೇತ್ರ ಬಿಟ್ಟು ಬೇರೆ ಯೋಚನೆಯನ್ನು ಮಾಡಲ್ಲ ಎಂದು ಹಾಸನದಲ್ಲಿ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರ ಸಂಬಂಧ ಮಾತನಾಡಿದ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಶಕ್ತಿ ಹೊಂದಿದೆ. ಹಾಗಾಗಿ ಬಹುಶಃ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಬಹುಶಃ ಹಾಸನದಲ್ಲಿ ಜೆಡಿಎಸ್ನವರು ನಮಗೆ ಬೆಂಬಲ ನೀಡಬಹುದು ಎಂದರು.

Loading

Leave a Reply

Your email address will not be published. Required fields are marked *