ಬಿವೈ ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ಸುಮಾರು 20 ಕ್ಷೇತ್ರದ ಪ್ರಚಾರಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಲಿಂಗಾಯತ ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಪ್ಲಾನ್. ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಸೇರಿದಂತೆ ಹಲವೆಡೆ ಶ್ರೀರಾಮುಲು, ಗೋವಿಂದ ಕಾರಜೋಳ, ತಿಪ್ಪಾರೆಡ್ಡಿ, ಪೂರ್ಣಿಮಾ ಸೇರಿದಂತೆ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತಿಳಿಸಲಾಗಿದೆ. ಸ್ಟಾರ್ ಪ್ರಚಾರಕ ಅಲ್ಲದಿದ್ದರೂ ಕೊನೆ ಕ್ಷಣದಲ್ಲಿ ವಿಜಯೇಂದ್ರರನ್ನ ಪ್ರಚಾರಕ್ಕೆ ಬಳಸಿಕೊಳ್ಳಲು ಪ್ಲಾನ್ ನಡೆದಿದೆ. ಪ್ರಚಾರಕ್ಕಾಗಿ ವಿಶೇಷ ಹೆಲಿಕಾಪ್ಟರ್ ಅಲಾಟ್ ಮಾಡಲಾಗಿದೆ. ಬಿಎಸ್ ಯಡಿಯೂರಪ್ಪ ಎಲ್ಲಡೆ ಪ್ರಚಾರಕ್ಕೆ ಲಭ್ಯವಿಲ್ಲದ ಹಿನ್ನಲೆ ಕೊನೆ ಕ್ಷಣದಲ್ಲಿ ವಿಜಯೇಂದ್ರ ಬಳಕೆಗೆ ನಿರ್ಧರಿಸಲಾಗಿದೆ.