ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ ನೀಡುವ ಬದ್ಧತೆ ಇಲ್ಲ: ಡಾ.ಜಿ.ಪರಮೇಶ್ವರ್

ತುಮಕೂರು: ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರವನ್ನ ಗೆಲ್ಲಲೇಬೇಕು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ 18 ವರ್ಷದವರಿಗೆ ಮತದಾನದ ಹಕ್ಕು ನೀಡಿದ್ದರು. ಈಗ ಅವರೇ ನಮ್ಮನ್ನು ವಿರೋಧ ಮಾಡುತ್ತಿದ್ದಾರೆ. ಕಾಂಗ್ರೆಸ್ ಬಡವರ ಪರವಾಗಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಪರ ಅಂತಾ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ವಿರೋಧಿಯಾಗಿದೆ ಅಲ್ಪಸಂಖ್ಯಾತರು ಈ ದೇಶದಲ್ಲಿ ಹುಟ್ಟಿಲ್ವಾ. ಕೋಟ್ಯಂತರ ಅಲ್ಪಸಂಖ್ಯಾತರಿದ್ದಾರೆ, ಅವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು. ಜೆಡಿಎಸ್​ ನವರು ಜಾತ್ಯತೀತ ಎಂದು ಇಟ್ಟುಕೊಂಡು ಬದಲಾಗಿದ್ದಾರೆ. ದೆಹಲಿಗೆ ಕರೆದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜವಾಬ್ದಾರಿ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಸಂಕಲ್ಪ ಮಾಡಬೇಕು. ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಗೆಲ್ಲಬೇಕು. ನೀವು ಈ ಕಚೇರಿಯಿಂದ ಹೊರಬೀಳುವಾಗ ಸಂಕಲ್ಪ ಮಾಡಿಕೊಂಡು ಹೋಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

 

Loading

Leave a Reply

Your email address will not be published. Required fields are marked *