ಕುತೂಹಲ ಕೆರಳಿಸಿದೆ ಬೊಮ್ಮಾಯಿ ದಿಢೀರ್ ದೆಹಲಿ ಪ್ರವಾಸ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಜೆಪಿ ವರಿಷ್ಟರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದು, ವಿಪಕ್ಷ ನಾಯಕನ ಆಯ್ಕೆ ಕುರಿತು ರಾಜ್ಯ ಕೇಸರಿ ಪಾಳಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ರಾಜ್ಯದಲ್ಲಿ ನೂತನ ಸರ್ಕಾರ ಬಂದು 3 ತಿಂಗಳು ಕಳೆಯುತ್ತಾ ಬಂದಿದ್ದರು ಇರುವರೆಗೂ ವಿಪಕ್ಷ ನಾಯಕ ಆಯ್ಕೆ ವಿಚಾರ ಬಿಜೆಪಿ ವರಿಷ್ಟರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಇದೇ ವೇಳೆ, ಕೇಂದ್ರ ಗೃಹ ಸಚಿವ ಅಮಿತ್​ ಷಾ ಕಛೇರಿಯಿಂದ ಬಸವರಾಜ್ ಬೊಮ್ಮಾಯಿಯವರಿಗೆ ಕರೆ ಬಂದ ಬೆನ್ನಲ್ಲೇ ಇಂದು ದೆಹಲಿ ಪ್ರಯಾಣ ಬೆಳೆಸಿರುವುದು. ವಿರೋಧ ಪಕ್ಷದ ನಾಯಕನ ಆಯ್ಕೆಯ ಕಸರತ್ತು ಭರ್ಜರಿಯಾಗಿ ನಡೆದಿದೆ,

ರಾಜ್ಯ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಸಿಟಿ ರವಿ, ಆರ್​.ಅಶೋಕ್​, ಯತ್ನಾಳ್​, ಹಾಗು ಬಸವರಾಜ್ ಬೊಮ್ಮಾಯಿ ಹೆಸರುಗಳು ಇದ್ದವು, ಆದರೇ, ಆಯ್ಕೆ ಪ್ರಕ್ರಿಯೆ ವಿಳಂಭವಾಗುತ್ತಲೆ ಇತ್ತು. ಕೇಂದ್ರ ಗೃಹ ಸಚಿವ ಅಮಿತ್​ ಷಾ ಕಚೇರಿಯಿಂದ ಕರೆ ಬಂದ ಬೆನ್ನಲ್ಲೇ ಇಂದು ಬಸವರಾಜ್ ಬೊಮ್ಮಾಯಿ ದಿಢೀರ್ ದೆಹಲಿ ಯಾತ್ರೆ ಕೈಗೊಂಡಿದ್ದಾರೆ.

ಇದರೊಂದಿಗೆ ಬೊಮ್ಮಾಯಿ ವಿಪಕ್ಷ ನಾಯಕರಾಗೋದು ಪಕ್ಕಾನಾ..? ಎನ್ನುವ ಕುತೂಹಲ ಮೂಡಿದ್ದು ಸದ್ಯದಲ್ಲೇ ಪ್ರತಿಪಕ್ಷ ನಾಯಕ ಹೆಸರು ಘೋಷಣೆ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Loading

Leave a Reply

Your email address will not be published. Required fields are marked *