ರಾಜ್ಯವನ್ನು ಕೇಂದ್ರ ಟಾರ್ಗೆಟ್ ಮಾಡುತ್ತಿದೆ – ರಾಮಲಿಂಗಾರೆಡ್ಡಿ

ರಾಮನಗರ ;- ರಾಜ್ಯವನ್ನು ಕೇಂದ್ರ ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಸರ್ಕಾರದ ನಡವಳಿಕೆಯನ್ನು ನೋಡಿದರೆ ನಮ್ಮ ರಾಜ್ಯವನ್ನು ಟಾರ್ಗೆಟ್‌ ಮಾಡುತ್ತಿದೆ ಎಂಬ ಭಾವನೆ ಮೂಡುತ್ತಿದೆ ಎಂದರು. ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕ.

ಆದರೆ ನಮಗೆ ಪರಿಹಾರ ಕೊಡುವಾಗ ಕೇಂದ್ರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದಲ್ಲಿ 25 ಬಿಜೆಪಿ ಸಂಸದರಿ¨ªಾರೆ. ಮೋದಿ ಬಳಿ ಕುಳಿತು ರಾಜ್ಯದ ವಾಸ್ತವ ಮನವರಿಕೆ ಮಾಡುವ ಧೈರ್ಯ ಯಾರಿಗೂ ಇಲ್ಲ. ಮೋದಿ ಬಳಿ ದೇವರಿಗೆ ನಮಸ್ಕಾರ ಹಾಕಿದ ರೀತಿ ನಮಸ್ಕಾರ ಹಾಕಿ ಬರ್ತಾರೆ ಅಷ್ಟೇ. ರಾಜ್ಯದ ಜನರು, ರೈತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಸಂಸದರ ವಿರುದ್ಧ ಟೀಕಾಪ್ರಹಾರ ನಡೆಸಿದರು.

Loading

Leave a Reply

Your email address will not be published. Required fields are marked *