ಬೆಂಗಳೂರು: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಮಾಡಿಕೊಂಡ ಗುಂಪಿಗೆ ಇಂಡಿಯಾ ಎಂದು ಹೆಸರಿಟ್ಟಿದೆ. ಅದು ಇಂಡಿಯಾ ಅಲ್ಲ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ. ಮುಂದೆ ನಡೆಯಲಿರುವ ಚುನಾವಣೆಗೆ ರಾಜ್ಯ ಕಾಂಗ್ರೆಸ್ ವರ್ಗಾವಣೆ ದಂಧೆ ಮೂಲಕ ಹಣ ಸಂಗ್ರಹಿಸಿ ಹೈಕಮಾಂಡ್ಗೆ ಕಳಿಸಲಿದೆ ಎಂದರು.