ಯಾದಗಿರಿ: ಒಂದೇ ವರ್ಷದಲ್ಲಿ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಯಾದಗಿರಿಯ ಶಹಾಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಲಿಕಯ್ಯ ಗುತ್ತೇದಾರ್ ‘ಸರಕಾರ ಚುನಾವಣೆಗೂ ಮುನ್ನ ನೀಡಿದ್ದ ಗ್ಯಾರಂಟಿ ಯೋಜನೆ ನೀಡುವಲ್ಲಿ ವಿಫಲವಾಗುತ್ತದೆ. ನಾನು ಭವಿಷ್ಯ ಹೇಳುತ್ತಿದ್ದೇನೆ, ಈ ಸರಕಾರ ನಡೆಯುವುದಿಲ್ಲ. ಪಾರ್ಲಿಮೆಂಟ್ ಚುನಾವಣೆ ನಡೆಯುವುದಕ್ಕಿಂತ ಮುಂಚೆ ಸರಕಾರ ಪತನವಾಗೋದು ಗ್ಯಾರಂಟಿ ಎಂದಿದ್ದಾರೆ.