ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗದೆ ಕಾಂಗ್ರೆಸ್ ಒದ್ದಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು ;- ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ಬದಲು ಹೊರ ರಾಜ್ಯಗಳಿಂದ ಸರ್ಕಾರ ಅಕ್ಕಿ ಖರೀದಿ ಮಾಡುತ್ತಿರುವ ಹಿಂದೆ ಕಮಿಷನ್ ಹುನ್ನಾರ ಇದೆ ಎಂದು ಶಾಸಕ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನೇಕ ರಾಜ್ಯಗಳಿಗೆ ನಮ್ಮ ರಾಜ್ಯದಿಂದಲೇ ಅಕ್ಕಿ ಸಾಗಾಣೆ ಆಗುತ್ತಿರುವಾಗ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸುವ ಉದ್ದೇಶವೇನು?
ರಾಜ್ಯದ ರೈತರ ಅಲ್ಲಿ ಗುಣಮಟ್ಟದ ಅಕ್ಕಿ ಲಭ್ಯವಿದ್ದು, ಇಲ್ಲಿಯೇ ಖರೀದಿಸಬಹುದು. ಆದರೆ, ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸಲು ಮುಂದಾಗಿರುವುದರ ಹಿಂದೆ ಕಮಿಷನ್ ಪಡೆಯುವ ಹುನ್ನಾರವಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ಕೊಡುತ್ತಿದ್ದು, ಹೆಚ್ಚುವರಿ 5 ಕೆಜಿಯನ್ನು ಎಲ್ಲಾದರೂ ಖರೀದಿಸಬಹುದು. ಅದನ್ನು ಬಿಟ್ಟು ಪ್ರಧಾನಿಯವರ ಮೇಲೆ ಆರೋಪ ಹೊರಿಸಲಾಗುತ್ತಿದೆ. ಮುಖ್ಯಮಂತ್ರಿಗಳಿಗೆ ವಾಸ್ತವ ಸ್ಥಿತಿ ಅರಿವಾಗಿದ್ದು, ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗದೆ ಕಾಂಗ್ರೆಸ್ ಒದ್ದಾಡುತ್ತಿದೆ ಎಂದು ಟೀಕಿಸಿದ್ದಾರೆ.

Loading

Leave a Reply

Your email address will not be published. Required fields are marked *