ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು.
ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ, ಕಾಂಗ್ರೆಸ್ ಬಹುಮತ ಪಡೆದ ನಂತರ ಕರ್ನಾಟಕವು ಗೂಂಡಾರಾಜ್ಯವಾಗಿ ಪರಿವರ್ತನೆ ಆಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಗಲಭೆ, ಹಲ್ಲೆ, ಹತ್ಯೆ, ದೊಂಬಿಗೆ ಕಾರಣವಾಗುತ್ತಿದ್ದಾರೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಇಂಥ ಘಟನೆಗಳು ನಡೆದಿವೆ. ಹೊಸಕೋಟೆಯ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಮ್ಮ ಕಾರ್ಯಕರ್ತ ಕೃಷ್ಣಪ್ಪ ಅವರ ಮನೆಗೆ ನುಗ್ಗಿ ಅವರ ಮಗ, ಕೃಷ್ಣಪ್ಪ, ಅವರ ಪತ್ನಿಗೆ ಹಲ್ಲೆ ಮಾಡಿದ್ದಾರೆ. ಕೃಷ್ಣಪ್ಪರ ಹತ್ಯೆ ಆಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಿಜಯೋತ್ಸವದ ಹೆಸರಿನಲ್ಲಿ ಬಂದು ಕೃಷ್ಣಪ್ಪರ ಮನೆ ಮುಂದೆ ಪಟಾಕಿ ಸಿಡಿಸಿದ್ದರು. ದೂರದಲ್ಲಿ ಪಟಾಕಿ ಸಿಡಿಸಲು ಹೇಳಿದ್ದು, ಕೃಷ್ಣಪ್ಪರ ಹತ್ಯೆ ಮಾಡಿದ್ದಾರೆ. ಅವರ ಮಗ, ಕೃಷ್ಣಪ್ಪರ ಪತ್ನಿಯ ಮೇಲೂ ಹಲ್ಲೆ ಮಾಡಿದ್ದಾರೆ. ಗಂಭೀರ ಗಾಯಗಳಾಗಿವೆ. ಇಡೀ ಘಟನೆಯನ್ನು ಖಂಡಿಸುವುದಾಗಿ ತಿಳಿಸಿದರು.