ಜಾತಿಗಣತಿ ವರದಿ ವಿಚಾರದಲ್ಲಿ ಕಾಂಗ್ರೆಸ್​ ನಡೆ ಟೀಕಿಸಿದ CT ರವಿ

ಬೆಂಗಳೂರು:- ಜಾತಿಗಣತಿ ವರದಿ ವಿಚಾರದಲ್ಲಿ ಸಿಟಿ ರವಿ ಕಾಂಗ್ರೆಸ್​ ನಡೆ ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂತರಾಜು ವರದಿಗೆ ಸಂಬಂಧಿಸಿದಂತೆ ಅದರ ಪ್ರಿನ್ಸಿಪಲ್ ಸೆಕ್ರೇಟರಿಯೇ ಸಹಿ ಹಾಕಿಲ್ಲ. ನನಗೆ ಇರುವ ಮಾಹಿತಿ ಪ್ರಕಾರ ಒಂದೂವರೆ ಕೋಟಿ ಜನರ ಉಲ್ಲೇಖವೇ ಇಲ್ಲ. ಹಾಗಿರುವಾಗ ಎಷ್ಟರ ಮಟ್ಟಿಗೆ ಕಾಂತರಾಜು ವರದಿ ಇದೆ ಎಂದು ಹೇಳಿದರು. ನಮ್ಮ ಕಡೆ ಗಾದೆ ಇದೆ. ಮಗುವನ್ನು ಚಿವುಟಿ, ತೊಟ್ಟಿಲು ತೂಗುವುದು. ಹಾಗೆ ಕಾಂಗ್ರೆಸ್ ನಡೆ ಇದೆ‌. ಹಿಂದೆ ಅಧಿಕಾರದಲ್ಲಿದ್ದಾಗಲೇ ವರದಿ ಸಿಕ್ಕಿತ್ತು. ಆಗಲೇ ಯಾಕೆ ಮಾಡಲಿಲ್ಲ‌? ಡಿಸಿಎಂ ಡಿ.ಕೆ. ಶಿವಕುಮಾರ್ ಇಲ್ಲಿ ಸಹಿ ಹಾಕುವ ಅವಶ್ಯಕತೆ ಇರಲಿಲ್ಲ.

ವರದಿ ಬಗ್ಗೆ ವಿರೋಧ ಇದ್ದರೆ ಒಂದೇ ಸಾಲಲ್ಲಿ ರಾಜೀನಾಮೆ ಕೊಟ್ಟು ಹೊರಗೆ ಬಂದು ಹೋರಾಟದಲ್ಲಿ ಭಾಗಿಯಾಗಬೇಕು. ಈಗಾಗಲೇ ವೀರಶೈವ ಸಮಾಜ, ಒಕ್ಕಲಿಗ ಸಮಾಜ ವೈಜ್ಞಾನಿಕವಾಗಿ ಸರಿ ಇಲ್ಲ ಎಂದು ವರದಿಯನ್ನು ವಿರೋಧಿಸಿದೆ. ಜಾತಿ ಗಣತಿ ಅಲ್ಲ ಅಂತಾದ್ರೆ ವರದಿ ಎಲ್ಲಿ ಹೋಯ್ತು?. ಒಂದೂವರೆ ಕೋಟಿ ಜನ ಎಲ್ಲಿ ಹೋದ್ರು. ಆಯೋಗದ ಅಧ್ಯಕ್ಷರ ಸಹಿಯೇ ಇಲ್ಲ. ಜಾತಿ ಗಣತಿ, ಸಮೀಕ್ಷೆ ಆಗಬೇಕು. ತುಳಿತಕ್ಕೊಳಗಾದ ಜನರಿಗೆ ಅನ್ಯಾಯ ಆಗಬಾರದು. ಪೊಲಿಟಿಕಲ್ ಫುಟ್ ಬಾಲ್ ಆಗಬಾರದು ಎಂದರು

Loading

Leave a Reply

Your email address will not be published. Required fields are marked *