ಪ್ರೀತಿಯನ್ನು ಬೆಳೆಸಿ ದ್ವೇಷವನ್ನು ಅಳಿಸುತ್ತೇವೆ – ಸಚಿವ ಹೆಚ್.ಕೆ.ಪಾಟೀಲ್

ಗ್ಯಾರಂಟಿಗಳ ಅನುಷ್ಠಾನ ಬಗೆಗಿನ ಬದ್ಧತೆ ರಾಜ್ಯಪಾಲರು ತಿಳಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ದಿಸೆಯಲ್ಲಿ ಹೋಗುತ್ತೆ. ಇದನ್ನು ರಾಜ್ಯಪಾಲ ಗೆಹ್ಲೋಟ್​ ಭಾಷಣದ ಮೂಲಕ ತಿಳಿಸಿದ್ದಾರೆ. ಸರ್ಕಾರದ ಜನಪರವಾದ ಕಾಳಜಿ ಬಗ್ಗೆ ರಾಜ್ಯಪಾಲರು ಹೇಳಿದ್ದಾರೆ. ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಸಂದೇಶ ನೀಡಿದ್ದೇವೆ. ಮನಸ್ಸನ್ನು ಕೂಡಿಸುವ ಎಲ್ಲ ವರ್ಗಗಳಿಗೂ ಗೌರವಿಸುವಂಥ ಸಂದೇಶ ನೀಡಿದ್ದೇವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡಬೇಕಾದ ಕರ್ತವ್ಯ, ಆ ಹೆಜ್ಜೆಗಳ ಸೂಕ್ಷ್ಮ ಪರಿಚಯವನ್ನು ರಾಜ್ಯಪಾಲರು ಮಾಡಿದ್ದಾರೆ. ಪ್ರವಾಸೋದ್ಯಮ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಕ್ಕೂ ಮಹತ್ವ ಕೊಟ್ಟಿದ್ದಾರೆ. ಪ್ರೀತಿಯನ್ನು ಬೆಳೆಸಿ ದ್ವೇಷವನ್ನು ಅಳಿಸುವಂತಹ ಕಾರ್ಯಕ್ರಮ ಕೊಡುವ ಭರವಸೆಯನ್ನು ನಾವು ನೀಡಿದ್ದೇವೆ ಎಂದು ವಿಧಾನಸೌಧದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ರು.

Loading

Leave a Reply

Your email address will not be published. Required fields are marked *