40 ಸಾವಿರ ಲಂಚಕ್ಕೆ ಬೇಡಿಕೆ: ಬೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ಅರೆಸ್ಟ್

ಬೆಂಗಳೂರು:- ಲಂಚ ಪಡೆಯುತ್ತಿದ್ದ ಬೆಸ್ಕಾಂನ ನಾಗವಾರ ಉಪ ವಿಭಾಗದ ಕಚೇರಿಯ ಸಹಾಯಕ ಲೆಕ್ಕಾಧಿಕಾರಿ ನವೀನ್‌ ಕುಮಾರ್‌ ಎಚ್.ಪಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ವಿದ್ಯುತ್‌ ಸಂಪರ್ಕವೊಂದರ ಗ್ರಾಹಕರ ಹೆಸರು ಬದಲಾವಣೆಗೆ ಪಿ.ಆರ್‌. ದೀಪಕ್‌ ಎಂಬುವವರು ಬೆಸ್ಕಾಂನ ನಾಗವಾರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕ್ರಿಯೆ ಪೂರ್ಣಗೊಳಿಸಲು ಸಹಾಯಕ ಲೆಕ್ಕಾಧಿಕಾರಿ ₹ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಚೌಕಾಸಿ ನಡೆಸಿದಾಗ ₹ 40 ಸಾವಿರ ಕೊಟ್ಟರೆ ಹೆಸರು ಬದಲಾವಣೆ ಮಾಡುವುದಾಗಿ ಒಪ್ಪಿಕೊಂಡಿದ್ದರು.

ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಅರ್ಜಿದಾರರು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್‌ ಘಟಕಕ್ಕೆ ದೂರು ಸಲ್ಲಿಸಿದ್ದರು. ಆರೋಪಿಯ ಸೂಚನೆಯಂತೆ ದೀಪಕ್‌ ಅವರು ನಾಗವಾರ ಉಪ ವಿಭಾಗ ಕಚೇರಿಯಲ್ಲಿ ಸೋಮವಾರ ಭೇಟಿಮಾಡಿ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದರು.

ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಎಸ್‌ಪಿ-2 ಕೆ. ವಂಶಿಕೃಷ್ಣ ಮಾರ್ಗದರ್ಶನದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಕುಮಾರಸ್ವಾಮಿ, ಬಾಲಾಜಿ ಬಾಬು, ಶಂಕರಪ್ಪ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು.

Loading

Leave a Reply

Your email address will not be published. Required fields are marked *