ಇಂದಿನಿಂದಲೇ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ರೆಡಿಯಿದೆ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಇಂನಿಂದಲೇ ಅನ್ನಭಾಗ್ಯ ಯೋಜನೆ ಜಾರಿಯಾಗಲಿದೆ. 5 ಅಕ್ಕಿ ನೀಡಲಾಗುವುದು, ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ಕೂಡ ರೆಡಿ ಇದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 1 ಅಂದ್ರೆ ಇಂದಿನಿಂದಲೇ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ರೆಡಿಯಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂ.ನಂತೆ ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿಯ ಹಣ ಸಿಗುತ್ತೆ. ಒಂದು ಮನೆಯಲ್ಲಿ 5 ಸದಸ್ಯರು ಇದ್ದರೆ, ಪ್ರತಿ ಕೆಜಿಗೆ 34 ರೂ.ನಂತೆ 25 ಕೆಜಿಗೆ 850 ರೂ. ಸಿಗುತ್ತದೆ.
ಅಕ್ಕಿ ಕೊಡುವವರೆಗೆ ಹಣ ನೀಡುವ ವ್ಯವಸ್ಥೆ ಮಾಡಿದ್ದೇವೆ. ಮುಂದೆ ಅಕ್ಕಿ ಸಿಕ್ಕ ಕೂಡಲೇ ಕೊಡುವ ವ್ಯವಸ್ಥೆ ಮಾಡುತ್ತೇವೆ. ರೇಷನ್ ಕಾರ್ಡ್ ಪ್ರಕಾರ ಯಾರು ಮುಖ್ಯಸ್ಥರಿದ್ದಾರೋ ಅವರ ಅಕೌಂಟ್‌ಗೆ ಹಣ ಹಾಕುತ್ತೇವೆ. ಬಹುತೇಕ ಮಂದಿ ಬ್ಯಾಂಕ್ ಖಾತೆ ಹೊಂದಿದ್ದಾರೆ. ಇಲ್ಲದವರು ತಕ್ಷಣ ಬ್ಯಾಂಕ್ ಖಾತೆ ಮಾಡಿಸಿಕೊಂಡರೆ ಹಣ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *