ಲೋಕಸಭಾ ಬಳಿಕ ಮುಖ್ಯಮಂತ್ರಿ ಆಗಬೇಕೆಂದು ಡಿಕೆ ಹೊರಟಿದ್ದಾರೆ: ಬಸನಗೌಡ ಯತ್ನಾಳ್

ವಿಜಯಪುರ: ಗ್ಯಾರಂಟಿ ಯೋಜನೆಯಿಂದಾಗಿ ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಹಣ ಸಂಪಾದನೆಗಾಗಿ ಪೈಪೋಟಿ ನಡೆಸಿದ್ದಾರೆ ಎಂದು ಔತಣಕೂಟ ಸಭೆಯಲ್ಲಿ BJP ಶಾಸಕ ಬಸನಗೌಡ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ನಿನ್ನೆ ಸಂಜೆ ಆಯೋಜಿಸಿದ್ದ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನಾ ಹಾಗೂ ಔತಣಕೂಟ ಸಭೆಯಲ್ಲಿ ಬಸನಗೌಡ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಕೊನೆ ಚುನಾವಣೆ ಅಂತಾ ಹೇಳಿ ಸಿದ್ದರಾಮಯ್ಯ ದುಡ್ಡು ಮಾಡ್ತಿದ್ದಾರೆ. ಲೋಕಸಭಾ ಬಳಿಕ ಮುಖ್ಯಮಂತ್ರಿ ಆಗಬೇಕೆಂದು ಡಿಕೆ ಹೊರಟಿದ್ದಾರೆ. ಇವರಿಬ್ಬರ ಮಧ್ಯೆ ನಮಗೇನು ಸಿಗ್ತಿಲ್ಲ ಅಂತ ಶಾಸಕರು ಅಸಮಾಧಾನಗೊಂಡಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *