ದೊಡ್ಮನೆ ಕುಟುಂಬದ ನಟ ಸೂರಜ್ ಗೆ ಅಪಘಾತ

ರನಟ ಡಾ.ರಾಜ್​ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಮಗ, ಯುವ ನಟ ಸೂರಜ್​​ಗೆ ಅಪಘಾತವಾಗಿರುವ ಘಟನೆ ಮೈಸೂರು ನಂಜನಗೂಡು ರಸ್ತೆಯಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಪಾರ್ವತಮ್ಮ ರಾಜ್ ಕುಮಾರ್ ಅವರ ತಮ್ಮನ ಮಗ ಸೂರಜ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು ಅಪಘಾತದಲ್ಲಿ ಸೂರಜ್ ತಮ್ಮ ಬಲಗಾಲನ್ನೇ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಸೂರಜ್ ಅವರ ​ಬಲ​ ಕಾಲಿನ ಮೇಲೆ ಟಿಪ್ಪರ್ ಹರಿದಿದ್ದು, ಗಂಭೀರ ಗಾಯ ಆಗಿದ್ದ ಕಾರಣ ವೈದ್ಯರು ಮಂಡಿವರೆಗೂ ಬಲಗಾಲನ್ನು ಕತ್ತರಿಸಿ ತೆಗೆದಿದ್ದಾರೆ.

ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಟ ಶಿವರಾಜ್ ಕುಮಾರ್, ನಿರ್ಮಾಪಕ ಚಿನ್ನೆಗೌಡ ಮೈಸೂರಿಗೆ ಭೇಟಿ ನೀಡಿ ಸೂರಜ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಸೂರಜ್ ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಚಿತ್ರದಲ್ಲಿ ನಟಿಸಿದ್ದರು.

Loading

Leave a Reply

Your email address will not be published. Required fields are marked *