ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಹೆಚ್ಚು ಕೆಡಿಸಿಕೊಳ್ಳುವುದು ಬೇಡ – ಹೆಚ್ ಡಿ ರೇವಣ್ಣ

ಬೆಂಗಳೂರು:- ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಹೆಚ್ಚು ಕೆಡಿಸಿಕೊಳ್ಳುವುದು ಬೇಡ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆಈ ಸಂಬಂಧ ಮಾತನಾಡಿದ ಅವರು, ಇದೆಲ್ಲ ಹೋಗಿ ಬಂದು ಏನಾಗಿದೆ‌. ಜೆಡಿಎಸ್​ನಿಂದ ಎಳೆದುಕೊಳ್ಳೋದು ಅಂತಿದ್ದಾರೆ. ಹಿಂದೆ ಏನಾಗಿತ್ತು ನಿಮಗೆ ಗೊತ್ತು. ಕಾಂಗ್ರೆಸ್ 120 ಸ್ಥಾನ ಇದ್ದಿದ್ದು, 80ಕ್ಕೆ ಬಂದಿತ್ತು. ಮತ್ತೆ ಅಂತದ್ದೇ ಪರಿಸ್ಥಿತಿ ಬರಲಿದೆ ಎಂದು ಟಾಂಗ್​ ನೀಡಿದರು.

ಜೆಡಿಎಸ್‌-ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಮೈತ್ರಿ ಬಗ್ಗೆ, ಜೆಡಿಎಸ್​ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳೋದು ಬೇಡ. ಯಾರೂ ಜೆಡಿಎಸ್ ಮುಳುಗೋಯ್ತು ಅಂತ ತಿಳಿಯೋದು ಕೂಡ ಬೇಡ. ಅಂದು ಏನೂ ಇಲ್ಲ ಜೆಡಿಎಸ್ ಮುಗಿದೋಯ್ತು ಅಂದಿದ್ದರು. ಆದರೆ ದೇವೇಗೌಡರು 114 ಸೀಟು ಗೆದ್ದು, ಲೋಕಸಭಾ ಕ್ಷೇತ್ರದಲ್ಲಿ 18 ಸೀಟು ಗೆದ್ದು ಪ್ರಧಾನಿ ಆದರು. ಜೆಡಿಎಎಸ್ ​ ಮುಗಿಸೋಕೆ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಜೆಡಿಎಸ್​ನಿಂದ 3ನೇ ಎರಡರಷ್ಟು ಕಾಂಗ್ರೆಸ್‌ಗೆ ಬರ್ತಾರೆ ಅಂತ ಸಚಿವ ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬಂದರೆ ಅವರನ್ನೆಲ್ಲ ಕರೆದುಕೊಳ್ಳಲು ಹೇಳಿ ಅಂತ ಟಕ್ಕರ್​ ನೀಡಿದರು. ಮುಂದೆ ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ಪ್ರವಹಿಸಿದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಬೆಳಗ್ಗೆ ಘಟನೆ ನಡೆದದ್ದು ವಿಷಯ ಗೊತ್ತಾಯಿತು. ಸಂಬಂಧಿಸಿದವರ ಜೊತೆ ಮಾತನಾಡಿದೆ. ಮೆಡಿಕಲ್ ಕಾಲೇಜು ವೈದ್ಯಾಧಿಕಾರಿ ಜೊತೆ ಮಾತಾಡಿದೆ. ಅಸ್ವಸ್ಥ ಹೆಣ್ಣು ಮಗಳಿಗೆ ಚಿಕಿತ್ಸೆ ಕೊಡುತ್ತಿರೋದಾಗಿ ಹೇಳಿದ್ದಾರೆ. ದಿನಾ ಒಂದು ಲಕ್ಷ ಜನ ದೇವಾಲಯಕ್ಕೆ ಬರುತ್ತಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *