ಬೆಂಗಳೂರು: ಕಳೆದ 2 ತಿಂಗಳ ಹಿಂದೆ ಹೋಟೆಲ್ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
8ನೇ ಎಸಿಎಂಎ ಕೋರ್ಟ್ ಆದೇಶದ ಮೇಲೆ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ಮಂಡ್ ರಸ್ತೆಯ ಕೇಝ್ ಹೋಟೆಲ್ ನಲ್ಲಿ ನಡೆದಿದ್ದ ಗಲಾಟೆ ಸಂಬಂಧ ಎಫ್ಐಆರ್ ದಾಖಲಾಗಿದೆ.
ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬುವರಿಗೆ ಹಲ್ಲೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ನಂತರ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಶ್ರೀನಿವಾಸ್ ನಾಯ್ಡು ಗೆ ಬೆದರಿಕೆ ಹಾಕಲಾಗಿದೆ. ಪೊಲೀಸ್ ಠಾಣೆಗೆ ಹೋದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಂತೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ದೂರು ದಾಖಲಿಸಿದ್ದರು. ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ರಿಕ್ಕಿ ರೈ ಮೇಲೆ ಹಲ್ಲೆ ಮಾಡಿದ್ದಾಗಿ ಶ್ರೀನಿವಾಸ್ ನಾಯ್ಡು ವಿರುದ್ಧ ದೂರು ಕೊಡಲಾಗಿತ್ತು. ಇದೀಗ ಕೋರ್ಟ್ ಪಿಸಿಆರ್ ಅನ್ವಯ ಎಫ್ಐಆರ್ ದಾಖಲಾಗಿದೆ.