ಚುನಾವಣೆ ಸಮಯದಲ್ಲಿ ಕೊಟ್ಟ ಐದು ಭರವಸೆ ಈಡೇಸಿದ್ದೇವೆ: ಬಿ. ನಾಗೇಂದ್ರ

ಬೀದರ್: ಐದು ವರ್ಷಗಳ ಕಾಲ ನಮ್ಮ ಸರಕಾರವನ್ನ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಬೀದರ್ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಇಲ್ಲಿದ್ದೆ ಅವರು ಏನು ಮಾಡೋಕೆ ಆಗಿಲ್ಲ ಸಿಂಗಾಪುರದಲ್ಲಿ ಕುಳಿತು ಏನು ಮಾಡಲು ಸಾಧ್ಯ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇಂತಹ ರಾಜಕಾರಣವನ್ನ ನಾವು ಬಹಳಷ್ಟು ನೋಡಿದ್ದೇವೆ ಕಂಡಿದ್ದೇವೆ. ನಮ್ಮ ಸರಕಾರ ಹೋಗುವ ವೇಗನೋಡಿ ವಿರೋಧ ಪಕ್ಷಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಚುನಾವಣೆ ಸಮಯದಲ್ಲಿ ಕೊಟ್ಟ ಐದು ಭರವಸೆ ಈಡೇಸಿದ್ದೇವೆ ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳುವ ಭಯ ಅವನ್ನ ಕಾಡುತ್ತಿದೆ. ಹೀಗಾಗಿ ನಾವು ಓಡುವ ಸ್ಫೀಡ್ ಕಡಿಮೆ ಮಾಡಬೇಕೆಂದು ವಿರೋಧ ಪಕ್ಷದವರು ಕುತಂತ್ರ ಮಾಡುತ್ತಿದ್ದಾರೆ ಎಂದರು.

Loading

Leave a Reply

Your email address will not be published. Required fields are marked *