ಮೈಸೂರು: ಈ ಬಾರಿಯೂ ದಸರಾ ಅಂಭಾರಿಯನ್ನು ಅಭಿಮನ್ಯು ಆನೆಯೇ ಹೊರುತ್ತದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು. ಗಜಪಯಣಕ್ಕೆ ವಿದ್ಯುಕ್ತವಾಗಿ ಚಾಲನೆ ಕೊಟ್ಟಿದ್ದೇವೆ. ಐತಿಹಾಸಿದ ದಸರಾ ಪ್ರಾರಂಭವಾಗಿದೆ. ಕಾಡಿನಿಂದ ನಾಡಿಗೆ ಆನೆಗಳು ತೆರಳುತ್ತವೆ. ಅಂಜನ್ ಈ ಬಾರಿ ದಸರಾಗೆ ಹೊಸ ಆನೆ ಸೇರ್ಪಡೆಯಾಗಿದೆ. ಒಂದುವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಿಶಾನೆ ಆನೆಯನ್ನು ಇನ್ನೂ ನಿರ್ಧಾರ ಮಾಡಿಲ್ಲ. ನಾಡ ಅಧಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.