ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರೆಂಟಿಗಳನ್ಮ ಪೂರೈಸಲು ಆಗುತ್ತಿಲ್ಲ: ಎಂ.ಪಿ.ರೇಣುಕಾಚಾರ್ಯ0

ದಾವಣಗೆರೆ: ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರೆಂಟಿಗಳನ್ಮ ಪೂರೈಸಲು ಆಗುತ್ತಿಲ್ಲ. ಇಷ್ಟರಲ್ಲಿಯೇ ರಾಜ್ಯ ಸರ್ಕಾರ ಪತನ ಆಗಲಿದೆ ಎಂದು ದಾವಣಗೆರೆಯಲ್ಲಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ. ಕೇಂದ್ರ ಸರ್ಕಾರವನ್ನು ಕೇಳಿ ಚುನಾವಣೆಯಲ್ಲಿ ಅನ್ನ ಭಾಗ್ಯ ಘೋಷಣೆ ಮಾಡಿದ್ದಾರಾ? ಕೇಂದ್ರ ಐದು ಕೆಜಿ ಸೇರಿ 15 ಕೆಜಿ ಅಕ್ಕಿ ರಾಜ್ಯ ಸರ್ಕಾರ ಕೊಡಬೇಕು. ರಾಜ್ಯ ಸರ್ಕಾರ ನೀಡಿದ ಐದು ಗ್ಯಾರೆಂಟಿ ಪೂರೈಕೆ ಸಿದ್ದರಾಮಯ್ಯ ಅವರಿಂದ ಆಗಲ್ಲ. ರಾಜ್ಯ ಸುಳ್ಳು ಭರವಸೆ ನೀಡಿದೆ ಎಂಬುವುದು ಸ್ಪಷ್ಟವಾಗುತ್ತದೆ. ರಾಜ್ಯ ಬಿಜೆಪಿಗೆ ನಾಯಕತ್ವ ಇದೆ. ಜುಲೈ ಮೂರರಂದು ಅಧಿವೇಶನ ಆರಂಭ ಆಗುತ್ತದೆ. ಅಧಿವೇಶನ ಆರಂಭ ಆಗುವುದಕ್ಕೂ ಮೊದಲು ಪ್ರತಿ ಪಕ್ಷದ ನಾಯಕನ ಆಯ್ಕೆ ಆಗುತ್ತದೆ ಎಂದರು.

Loading

Leave a Reply

Your email address will not be published. Required fields are marked *