ಮೈಸೂರು ;- ಸಂಸದ ಪ್ರತಾಪ್ ಸಿಂಹ ಅವರ ಬಗ್ಗೆ ಫೇಸ್ಬುಕ್ ನಲ್ಲಿ ಅವಹೇಳನ ಮಾಡಿದ ಮಾಡಿದ ಹೆಡ್ ಕಾನ್ಸ್ ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ. ಪ್ರದೀಪ್ ಅಮಾನತುಗೊಂಡವರು. ಪ್ರದೀಪ್ ಅವರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಾಮೆಂಟ್ ಹಾಕಿದ್ದರು.
ಸ್ಕ್ರೀನ್ ಶಾಟ್ ಸಹಿತ ಸಂಸದ ಪ್ರತಾಪ್ ಸಿಂಹ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ಮೈಸೂರು ಪೊಲೀಸ್ ಆಯುಕ್ತ ರಮೇಶ ಬಾನೋತ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.