ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮಾನ್ಸೂನ್ ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದ್ದು, ಹೀಗಾಗಿ 5 ದಿನ ಮಳೆಯ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Loading

Leave a Reply

Your email address will not be published. Required fields are marked *