ಬೆಂಗಳೂರು: ಒಂದೇ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅನೇಕ ಎಫ್ಐಆರ್ಗಳನ್ನು ದಾಖಲಿಸಿರುವುದನ್ನು ಪ್ರಶ್ನಿಸಿ ನಟ-ನಿರ್ದೇಶಕ ಉಪೇಂದ್ರ ಎರಡನೇ ರಿಟ್ ಅರ್ಜಿಯೊಂದಿಗೆ ಮತ್ತೆ ಹೈಕೋರ್ಟ್ಗೆ ಮೊರೆ ಹೋಗಿದ್ದರು. ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು.
ಮೊನ್ನೆಯಷ್ಟೇ ಹೈಕೋರ್ಟ್ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ಎಫ್.ಐ.ಆರ್ ಗೂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಉಪೇಂದ್ರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಾಡಿ, ಒಂದೇ ಹೇಳಿಕೆ ಮೇಲೆ ಎರಡು ಎಫ್ಐಆರ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧ ಎಲ್ಲಾ ದೂರುಗಳಿಗೂ ತಡೆ ನೀಡುವಂತೆ ಮನವಿ ಮಾಡಿದರು. ಉಪೇಂದ್ರ ವಕೀಲರ ಮನವಿ ಪುರಸ್ಕರಿಸಿದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರು ಮಧ್ಯಂತರ ತಡೆಯಾಜ್ಞೆ ಆದೇಶ ನೀಡಿದರು.