ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿರುವ, ಕನ್ನಡದ ಪಂಡಿತ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ಜಿಲ್ಲಾಡಳಿತವು ನೋಟಿಸ್ ನೀಡಲಾಗಿದೆ. ದೇವಾಲಯದ ಆದಾಯ ಕಡಿಮೆ ಇರುವುದರಿಂದ ಸರ್ಕಾರ ನೀಡಿದ ಸಂಬಳ ವಾಪಸ್ ನೀಡುವಂತೆ ತಿಳಿಸಲಾಗಿದೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಜಮೆಯಾಗುತ್ತಿತ್ತು. ಇದೀಗ 7,500 ರೂ. ಸಂಬಳದಲ್ಲಿ 4,500 ವಾಪಸ್ ನೀಡಲು ಸೂಚನೆ ನೀಡಲಾಗಿದೆ.
ಕಣ್ಣನ್ ಅವರು ಕಳೆದ 50 ವರ್ಷಗಳಿಂದ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ಜಿಲ್ಲಾಡಳಿತ ತೆಡೆಹಿಡಿದಿದೆ. ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೀಡಿರುವ ನೋಟಿಸ್ ಕಂಡು ಕಣ್ಣನ್ ಅವರು ನೋಟಿಸ್ ನೋಡಿ ಆತಂಕಗೊಂಡಿದ್ದಾರೆ.