ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಮಾಡಿಕೊಂಡಿರುವಂತಹ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿದೆ.
ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದರು. ಸದ್ಯ ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.