ಸವದಿಯವರನ್ನ ಕರೆತರುವ ಚರ್ಚೆಯಲ್ಲಿ ನಾನು ಕೂಡ ಒಬ್ಬ: ರಮೇಶ್ ಕತ್ತಿ

ಬೆಳಗಾವಿ: ಲಕ್ಷ್ಮಣ  ಸವದಿಯವರು ಬಿಜೆಪಿಗೆ ಮರಳಿ ಬಂದರೆ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬರುತ್ತದೆ ಎಂದು ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ತಾರೆ ಎಂಬ ವಿಚಾರ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಲಕ್ಷ್ಮಣ  ಸವದಿಯವರು ಬಿಜೆಪಿಗೆ ಬರುವ ಕುರಿತು ಈಗಾಗಲೇ ಚರ್ಚೆ ಶುರುವಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಚರ್ಚೆ ಪ್ರಾರಂಭ ಆಗಿದೆ. ನಮ್ಮನ್ನೂ ಕೂಡ ವರಿಷ್ಠರು ಕರೆದು ಮಾತನಾಡಿಸಿ ಅಭಿಪ್ರಾಯ ಕೇಳಿದ್ದಾರೆ. ಸವದಿಯವರನ್ನ ಕರೆತರುವ ಚರ್ಚೆಯಲ್ಲಿ ನಾನು ಕೂಡ ಒಬ್ಬ ಎಂದಿದ್ದಾರೆ.

ಸವದಿ ಅವರಿಗೆ ಸ್ಥಾನಮಾನ ಕೊಡುವ ಬಗ್ಗೆ ಮಾತನಾಡಿದ ಅವರು, ಸ್ಥಾನಮಾನಕ್ಕಾಗಿ ಯಾರೂ ಬರುವುದಿಲ್ಲ. ಕಾಂಗ್ರೆಸ್‌ಗೆ ಹೋದಾಗ ಏನು ಸ್ಥಾನಮಾನ ಕೇಳಿ ಹೋಗಿದ್ದರು ಅವರು ಏನು ಕೊಟ್ಟರೊ. ನಮ್ಮ ಪಕ್ಷಕ್ಕೆ ಬಂದರೆ ಏನು ಕೊಡಬೇಕು ಎಂಬುದನ್ನು ನಮ್ಮನ್ನ ಕರೆದು ನಿರ್ಣಯ ಮಾಡ್ತಾರೆ. ರಾಜ್ಯ ಮತ್ತು ರಾಷ್ಟ್ರೀಯ ವರಿಷ್ಠರು ಹೇಳಿದಂತೆ ಗೌರವಯುತವಾಗಿ ಅವರನ್ನ ಬರಮಾಡಿಕೊಳುತ್ತೇವೆ ಎಂದು ಪರೋಕ್ಷವಾಗಿ ಸವದಿಯನ್ನ ಕರೆತರುವ ವಿಚಾರ ಫೈನಲ್ ಹಂತಕ್ಕೆ ತಲುಪಿದೆ ಎನ್ನುವುದರ ಸುಳಿವು ಬಿಟ್ಟುಕೊಟ್ಟಿದ್ದಾರೆ.

Loading

Leave a Reply

Your email address will not be published. Required fields are marked *