ಬೆಂಗಳೂರು: ಬಿ.ಕೆ.ಹರಿಪ್ರಸಾದ್ ಕೂಡ ಕೆಲವು ಕಡೆ ಸಿಎಂ ಮಾಡಿದ್ದಾರೆ. ಅವರು ಕಾಂಗ್ರೆಸ್ ಕುಟುಂಬದ ಸದಸ್ಯರು. ಅವರ ಹೇಳಿಕೆ ಕರ್ನಾಟಕಕ್ಕೆ ಸಂಬಂಧಪಟ್ಟಿಲ್ಲ. ಹರಿಪ್ರಸಾದ್ ಅವರ ಅನುಭವ ಹಂಚಿಕೊಂಡಿದ್ದಾರೆ. ಕೆಲವು ಸಮುದಾಯಗಳಿಗೆ ಅವಕಾಶ ಸಿಗಲಿಲ್ಲ. ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ, ಸಿಎಂ ಅಧಿಕಾರ ಹಂಚಿಕೆ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೈಕಮಾಂಡ್ಗೆ ಬಿಟ್ಟಿದ್ದು, ನಮ್ಮ ಜೊತೆ ಯಾರೂ ಚರ್ಚೆ ಮಾಡಿಲ್ಲ. ಸಿದ್ದರಾಮಯ್ಯನವರು ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ. ನಾನು ಈ ಅವಧಿಯಲ್ಲಿ ಸಿಎಂ ರೇಸ್ನಲ್ಲಿ ಇಲ್ಲ. ಮುಂದಿನ ಅವಧಿಯಲ್ಲಿ ಇರುತ್ತೇನೆ ಎಂದು ಹೇಳಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.