ಪಕ್ಷ ಸೂಚಿಸಿದ್ರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ; ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಗೆ ನನ್ನದು ಯಾವ ಬೇಡಿಕೆ ಇಲ್ಲ. ಪಕ್ಷದ ತೀರ್ಮಾನಕ್ಕೆ ನಾನು‌ ಬದ್ಧನಾಗಿದ್ದೇನೆ. ಪಕ್ಷ ಸೂಚಿಸಿದರೆ ನಾನು ಅಭ್ಯರ್ಥಿಯಾಗುತ್ತೇನೆ. ಪಕ್ಷದ ಮಾತನ್ನು ನಾನು ಕೇಳಲೇಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ‌ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲಬೇಕು. ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನ ಗೆಲ್ಲಿಸಿದ್ದಾರೆ. ಬಿಜೆಪಿ ದುರಾಡಳಿತ ನೋಡಿ ಬೇಸತ್ತು ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಗ್ಯಾರೆಂಟಿ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲೋಕೆ ತಂತ್ರಗಾರಿಕೆ ಮಾಡಬೇಕು ಎಂದರು.

Loading

Leave a Reply

Your email address will not be published. Required fields are marked *